ರಾಮನಗರ: ಹಿಜಾಬ್ ಧರಿಸಿ ತರಗತಿಗೆ ತೆರಳಲು ಅವಕಾಶ ನೀಡದಿರುವುದನ್ನು ಖಂಡಿಸಿ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ಬುಧವಾರ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಬೆಳಿಗ್ಗೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕಾಲೇಜಿನ ಒಳಗೆ ತೆರಳಿದರು. ಆದರೆ ಅವರನ್ನು ತರಗತಿ ಒಳಗೆ ತೆರಳಲು ಕಾಲೇಜಿನ ಸಿಬ್ಬಂದಿ ಒಳ ಬಿಡಲಿಲ್ಲ. ಹೈಕೋರ್ಟ್ ಸೂಚನೆಯಂತೆ ಸದ್ಯ ಯಾವುದೇ ಧಾರ್ಮಿಕ ವಸ್ತ್ರ ಧರಿಸಿ ತರಗತಿ ಒಳಗೆ ಬರಲು ಅವಕಾಶ ಇಲ್ಲ ಎಂದು ತಡೆದರು.
ಇದನ್ನು ಆಕ್ಷೇಪಿಸಿ ವಿದ್ಯಾರ್ಥಿನಿಯರು ಕಾಲೇಜಿನ ಹೊರಗಡೆ ಬಂದು ಪ್ರತಿಭಟನೆ ನಡೆಸಿದರು. ನಂತರ ತಹಶೀಲ್ದಾರ್ ಮತ್ತು ಡಿವೈಎಸ್ಪಿ ನೇತೃತ್ವದಲ್ಲಿ ಮತ್ತೆ ಕಾಲೇಜಿನ ಒಳಗೆ ತೆರಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.