ADVERTISEMENT

ಯೇಸು ಪ್ರತಿಮೆ ವಿರೋಧಿಸಿ ಕನಕಪುರದಲ್ಲಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2020, 7:26 IST
Last Updated 13 ಜನವರಿ 2020, 7:26 IST
ಕನಕಪುರದಲ್ಲಿ ಪ್ರತಿಭಟನಾ ಮೆರವಣಿಗೆ
ಕನಕಪುರದಲ್ಲಿ ಪ್ರತಿಭಟನಾ ಮೆರವಣಿಗೆ   

ರಾಮನಗರ: ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಸೋಮವಾರ ಕನಕಪುರದಲ್ಲಿ ಬೃಹತ್‌ ಮೆರವಣಿಗೆ ನಡೆಯಿತು.

ಅಯ್ಯಪ್ಪದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆಯು ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಬಂದಿತು. ಸುಮಾರು ಒಂದು ಕಿ.ಮೀ ಉದ್ದದಮೆರವಣಿಗೆಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಹೆಜ್ಜೆ ಹಾಕಿದರು.

ಬಳಿಕ ಚನ್ನಬಸಪ್ಪ ವೃತ್ತದಲ್ಲಿ ಜಾಥಾ ಸಮಾವೇಶಗೊಂಡಿತು. ಹಿಂದೂ ದೇವತೆಗಳು, ಮುನೇಶ್ವರನ ಹೆಸರಿನಲ್ಲಿ ಘೋಷಣೆ ಕೂಗಿದ ಜನರು ಡಿಕೆ ಶಿವಕುಮಾರ್ ವಿರುದ್ಧವಾಗಿಯೂ ಧಿಕ್ಕಾರ ಕೂಗಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.