ರಾಮನಗರ: ಕನಕಪುರ ತಾಲ್ಲೂಕಿನ ಮುನೇಶ್ವರನ ಬೆಟ್ಟ (ಕಪಾಲ ಬೆಟ್ಟ) ಉಳಿಸಲು ಮುಂದಾಗದೇ ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರವು ಈ ವಿಚಾರದಲ್ಲಿ ಉದ್ದೇಶಪೂರ್ವಕವಾಗಿ ಮೌನ ವಹಿಸಿರುವುದು ಸರಿಯಲ್ಲ. ಬೆಟ್ಟದ ಮೇಲೆ ನಿರ್ಮಾಣ ಹಂತದಲ್ಲಿ ಇರುವ ಪ್ರತಿಮೆಯನ್ನು ತೆರವುಗೊಳಿಸಬೇಕು. ಗೋಮಾಳ ಜಾಗವನ್ನು ಕ್ರೈಸ್ತ ಮಿಶನರಿಗಳಿಂದ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.