ADVERTISEMENT

ಪೊಲೀಸ್ ಇಲಾಖೆಯಿಂದಲೇ ಪಿಎಸ್‌ಐ ನೇಮಕಾತಿ ಅಕ್ರಮ ಬಹಿರಂಗ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 4 ಮೇ 2022, 7:15 IST
Last Updated 4 ಮೇ 2022, 7:15 IST
   

ರಾಮನಗರ: ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರಿಗೆ ಆದ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ಪೊಲೀಸ್ ಇಲಾಖೆಯವರೇ ಪಿಎಸ್ಐ ನೇಮಕಾತಿ ಅಕ್ರಮವನ್ನು ಬಯಲಿಗೆ ಎಳೆದಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಬುಧವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಅಪಘಾತಕ್ಕೂ ಪಿಎಸ್‌ಐ ಅಕ್ರಮ ಬಯಲಿಗೆ ಬರುವುದಕ್ಕೂ ನಂಟಿದೆ. ಪೊಲೀಸ್ ಇಲಾಖೆ ಇದನ್ನು ಅಪಘಾತ ಎಂದು ಹೇಳಿತ್ತು. ಆದರೆ, ಬಿಜೆಪಿ ನಾಯಕರು ಉರ್ದು ವಿಚಾರವಾಗಿ ಆದ ಗಲಾಟೆ ಎಂದು ಕಥೆ ಕಟ್ಟಿದ್ದರು. ಬಿಜೆಪಿಯ ಒಬ್ಬ ವಕ್ತಾರ ಕಮಲ್ ಪಂಥ್ ವಿರುದ್ಧ ಆರೋಪ ಮಾಡಿದ್ದರು. ಅದೇ ವಕ್ತಾರರಿಗೆ ಕಲಬುರ್ಗಿಯಲ್ಲಿ ಬಂಧನ ಆದವರ ಲಿಂಕ್ ಇತ್ತು. ಹೀಗಾಗಿ‌ ನಿಷ್ಠಾವಂತ ಅಧಿಕಾರಿಗೆ ಆದ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು, ಸರ್ಕಾರಕ್ಕೆ ಬುದ್ಧಿ ಕಲಿಸಲು ಅವರ ಅಭಿಮಾನಿಗಳೇ ಇದನ್ನು ಬಯಲಿಗೆ ಎಳೆದರು ಎಂದು ದೂರಿದರು.

ಶೇ 30ರಷ್ಟು ಮಂದಿ ಅಕ್ರಮದಲ್ಲಿ ಭಾಗಿ ಆಗಿರಬಹುದು. ಆದರೆ ಇನ್ನುಳಿದವರು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಹೇಳಿದರು.

ADVERTISEMENT

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.