ಹಾರೋಹಳ್ಳಿ: ತಾಲ್ಲೂಕಿನ ಕಾಡು ಜಕ್ಕಸಂದ್ರ ಹತ್ತಿರದ ಮುನಿಮಾರನದೊಡ್ಡಿ ಹೊರವಲಯದಲ್ಲಿ ಗುರುವಾರ ಬೆಳಿಗ್ಗೆ ರೈತ ಹನುಮಂತಯ್ಯ ಅವರ ಜಮೀನಿನಲ್ಲಿ 15 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದೆ.
ರೈತ ಹನುಮಂತಯ್ಯ ಹಸುಗಳಿಗೆ ಸೀಮೆ ಹುಲ್ಲು ಕೊಯ್ಯಲು ಜಮೀನಿಗೆ ಹೋಗಿದ್ದ ಸಮಯದಲ್ಲಿ ಹುಲ್ಲಿನ ನಡುವೆ ಹೆಬ್ಬಾವು ಕಾಣಿಸಿಕೊಂಡಿದೆ. ಈ ಬಗ್ಗೆ ಹಾರೋಹಳ್ಳಿ ಅರಣ್ಯ ವ್ಯಾಪ್ತಿ ಗಸ್ತು ಪಾಲಕ ಶಶಿಕುಮಾರ್ ಅವರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜೊತೆಗೆ ಸ್ನೇಕ್ ವಿಶ್ವನಾಥ್ ಸ್ಥಳಕ್ಕೆ ಆಗಮಿಸಿ ಹೆಬ್ಬಾವನ್ನು ಹಿಡಿದು ಆನೇಕಲ್ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.