ADVERTISEMENT

ರಾಗಿ ಖರೀದಿ: ನಾಳೆ ಸಭೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 13:41 IST
Last Updated 13 ಫೆಬ್ರುವರಿ 2020, 13:41 IST

ಮಾಗಡಿ: 2019–20ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸುವಲ್ಲಿ ಉಂಟಾಗಿರುವ ಗೊಂದಲಗಳ ನಿವಾರಣೆ ಬಗ್ಗೆ ಫೆ.14ರಂದು ಮದ್ಯಾಹ್ನ 12 ಗಂಟೆಗೆ ತಹಶೀಲ್ದಾರ್‌ ಎನ್‌.ರಮೇಶ್‌ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.

ರೈತ ಸಂಘದ ಪದಾಧಿಕಾರಿಗಳು, ರಾಗಿಬೆಳೆಗಾರರು, ರಾಗಿ ಖರೀದಿ ಕೇಂದ್ರದ ಮೇಲ್ವಿಚಾರಕ ಶ್ರೀಧರ್‌ ಭಾಗವಹಿಸಲಿದ್ದಾರೆ ಎಂದು ತಹಶೀಲ್ದಾರ್‌ ಕಚೇರಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT