ADVERTISEMENT

ರಾಮನಗರ: ರೇಡಿಯೇಟರ್‌ ಸಿಡಿದು ಬಾಲಕಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 5:52 IST
Last Updated 20 ಸೆಪ್ಟೆಂಬರ್ 2021, 5:52 IST

ರಾಮನಗರ: ನಗರದಿಂದ ಮಾಗಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ರೇಡಿಯೇಟರ್ ಸಿಡಿದು ಬಾಲಕಿ ಕಾಲಿಗೆ ಸುಟ್ಟ ಗಾಯವಾಗಿರುವ ಘಟನೆ ಇದೇ 14ರಂದು ನಡೆದಿದೆ. ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ವೆಂಕಟಲಕ್ಷ್ಮಮ್ಮ (8) ಎಂಬ ಬಾಲಕಿ ಗಾಯಗೊಂಡಿದ್ದಾಳೆ. ಆಕೆ ತನ್ನ ತಾಯಿ ಹಾಗೂ ಸಹೋದರನ ಜೊತೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನ ನಡೆದಿದ್ದು, ಕಾಲು ಸುಟ್ಟಿದೆ. ಬಾಲಕಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೂರ್ಣ ಚಿಕಿತ್ಸಾ ವೆಚ್ಚ ಭರಿಸುವಂತೆ ಪಾಲಕರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT