ADVERTISEMENT

‘ತಂಬಾಕು ನಿಷೇಧ ಜಾಗೃತಿ ಮೂಡಿಸಿ’

​ಪ್ರಜಾವಾಣಿ ವಾರ್ತೆ
Published 22 ಜುಲೈ 2019, 13:32 IST
Last Updated 22 ಜುಲೈ 2019, 13:32 IST
ಮಾಗಡಿ ಆರ್‌.ಆರ್‌.ರಸ್ತೆಯಲ್ಲಿ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ತುಕಾರಾಮ್‌ ಅರಿವು ಮೂಡಿಸಿದರು
ಮಾಗಡಿ ಆರ್‌.ಆರ್‌.ರಸ್ತೆಯಲ್ಲಿ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ತುಕಾರಾಮ್‌ ಅರಿವು ಮೂಡಿಸಿದರು   

ಮಾಗಡಿ: ಪಟ್ಟಣದ ರಾಮರಾಜ ಅರಸ್‌ ರಸ್ತೆಯಲ್ಲಿ ಸಾರ್ವಜನಿಕರಿಗೆ ತಂಬಾಕು ನಿಯಂತ್ರಣ ಕಾಯ್ದೆ ಬಗ್ಗೆ ಅರಿವು ಮೂಡಿಸಲಾಯಿತು. ಕಾಯ್ದೆ ಅನುಷ್ಠಾನ ಅಧಿಕಾರಿ ಸಂಪತ್‌ ಮಾತನಾಡಿ, ತಂಬಾಕು ಉತ್ಪನ್ನಗಳ ಮಾರಾಟ ಅಪರಾಧ. ಧೂಮಪಾನದ ಬಗ್ಗೆ ಎಚ್ಚರಿಕೆ ನಾಮಫಲಕ ಅಳವಡಿಸಬೇಕು ಎಂದರು.

ಜಿಲ್ಲಾ ಮಟ್ಟದ ಅಧಿಕಾರಿ ಚಂದ್ರಶೇಖರ್ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಅಪರಾಧ ಎಂದರು.
ತಾಲ್ಲೂಕು ಮಟ್ಟದ ಅಧಿಕಾರಿ ತುಕಾರಾಮ್‌, ಆರೋಗ್ಯ ಶಿಕ್ಷಣಾಧಿಕಾರಿ ಆರ್‌.ರಂಗನಾಥ್‌, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು.

ಕೋಟ್ಪಾ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ ವಿಧಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.