ರಾಮನಗರ: ಹಾಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ವರ್ಗಾವಣೆಗೊಂಡಿದ್ದು, ಸರ್ಕಾರ ಅವರ ಜಾಗಕ್ಕೆ ಕೆ. ರಾಕೇಶ್ಕುಮಾರ್ ಅವರನ್ನು ನೇಮಕ ಮಾಡಿದೆ.
ರಾಕೇಶ್ ಈ ಹಿಂದೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ಸೇವೆಯಲ್ಲಿದ್ದು, ಅದಕ್ಕೂ ಮುನ್ನ ತುಮಕೂರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಜಮಖಂಡಿ ಉಪವಿಭಾಗಾಧಿಕಾರಿ, ಶಿವಮೊಗ್ಗ ಶಿವಮೊಗ್ಗ ಜಿ.ಪಂ. ಆಗಿಯೂ ಅವರು ಈ ಹಿಂದೆ ಕಾರ್ಯ ನಿರ್ವಹಿಸಿದ್ದಾರೆ.
ಅರ್ಚನಾ ಅವರು ಕಳೆದೊಂದು ವರ್ಷಕ್ಕೂ ಹೆಚ್ಚು ಕಾಲ ರಾಮನಗರ ಜಿಲ್ಲಾಧಿಕಾರಿ ಹುದ್ದೆಯಲ್ಲಿ ಇದ್ದರು. ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಅವರಿಗೆ ಸರ್ಕಾರ ಯಾವುದೇ ಹುದ್ದೆಗೆ ನಿಯೋಜನೆ ಮಾಡಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.