ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ತವರೂರಾದ ರಾಮನಗರ ಜಿಲ್ಲೆ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ತಮ್ಮ ಪೂರ್ವಿಕರ ಸಮಾಧಿಗಳಿಗೆ ಕುಟುಂಬ ಸದಸ್ಯರ ಜತೆ ಶುಕ್ರವಾರ ಪೂಜೆ ಸಲ್ಲಿಸಿದರು.
ಪ್ರತಿವರ್ಷ ಗಣೇಶ ಹಬ್ಬದ ದಿನ ಮನೆತನದ ಹಿರಿಯರ ಸಮಾಧಿಗಳಿಗೆ ಪೂಜೆ ಸಲ್ಲಿಸುವುದು ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಹಿಂದಿನಿಂದಲೂ ನಡೆದು ಬಂದಿರುವ ಪದ್ಧತಿ.
ಶಿವಕುಮಾರ್ ಅವರ ತಾಯಿ ಗೌರಮ್ಮ, ಪತ್ನಿ ಉಷಾ, ಮಕ್ಕಳು ಪೂಜೆಯಲ್ಲಿ ಪಾಲ್ಗೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.