ರಾಮನಗರ: ಕನಕಪುರ ತಾಲ್ಲೂಕಿನ ಕಬ್ಬಾಳು ಅರಣ್ಯ ಪ್ರದೇಶದಲ್ಲಿ ಬುಧವಾರ ಆನೆಯೊಂದರ ಕಳೇಬರ ಪತ್ತೆಯಾಗಿದೆ.
ಸುಮಾರು 30 ವರ್ಷ ಪ್ರಾಯದ ಗಂಡಾನೆ ಇದಾಗಿದೆ. ಮೂರ್ನಾಲ್ಕು ದಿನದ ಹಿಂದೆಯೇ ಮೃತಪಟ್ಟಿದೆ. ನಿತ್ರಾಣಗೊಂಡು ಇದ್ದಲ್ಲಿಯೇ ಪ್ರಾಣ ಬಿಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಪಶು ವೈದ್ಯರಿಂದ ಮರಣೋತ್ತರ ಪರೀಕ್ಷೆ ಬಳಿಕ ಆನೆಯ ಕಳೇಬರವನ್ನು ಅಲ್ಲಿಯೇ ಸಂಸ್ಕಾರ ಮಾಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.