ADVERTISEMENT

ಅರಳಾಪುರ: ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನಗದ್ದೆ ಭಸ್ಮ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2023, 8:52 IST
Last Updated 3 ಆಗಸ್ಟ್ 2023, 8:52 IST
ಚನ್ನಪಟ್ಟಣ ತಾಲ್ಲೂಕಿನ ಅರಳಾಪುರ ಗ್ರಾಮದಲ್ಲಿ ಬೆಂಕಿಯಿಂದ ಸುಟ್ಟಿರುವ ಕಬ್ಬಿನ ಬೆಳೆ
ಚನ್ನಪಟ್ಟಣ ತಾಲ್ಲೂಕಿನ ಅರಳಾಪುರ ಗ್ರಾಮದಲ್ಲಿ ಬೆಂಕಿಯಿಂದ ಸುಟ್ಟಿರುವ ಕಬ್ಬಿನ ಬೆಳೆ   

ಚನ್ನಪಟ್ಟಣ: ತಾಲ್ಲೂಕಿನ ಅರಳಾಪುರ ಗ್ರಾಮದಲ್ಲಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಸಂಪೂರ್ಣ ಭಸ್ಮವಾಗಿದೆ.

ಗ್ರಾಮದ ರೈತ ನಾಗೇಂದ್ರಗೌಡ ಅವರ ಕಬ್ಬಿನಗದ್ದೆಗೆ ಬೆಂಕಿ ತಗುಲಿದ್ದು, ಗದ್ದೆಯ ಮಧ್ಯಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಒಂದಕ್ಕೊಂದು ತಗುಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಸ್ಥಳೀಯರು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಕಬ್ಬಿನಗದ್ದೆಯಲ್ಲಿದ್ದ 35 ತೆಂಗಿನಮರಗಳು ಸುಟ್ಟು ಹೋಗಿವೆ. ಗದ್ದೆಗೆ ಹನಿ ನೀರಾವರಿಗಾಗಿ ಅಳವಡಿಸಿದ್ದ ಪೈಪ್‌ಗಳು ಸುಟ್ಟಿವೆ. ಘಟನೆಯಲ್ಲಿ ₹8 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ADVERTISEMENT

ತಾಲ್ಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.