ADVERTISEMENT

ರಾಮನಗರ: ಆಯತಪ್ಪಿ ನದಿಗೆ ಬಿದ್ದ ಯುವಕ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 6:28 IST
Last Updated 8 ಆಗಸ್ಟ್ 2021, 6:28 IST
ನದಿಗೆ ಬಿದ್ದು ಸಾವಿಗೀಡಾದ ಯುವಕ
ನದಿಗೆ ಬಿದ್ದು ಸಾವಿಗೀಡಾದ ಯುವಕ   

ರಾಮನಗರ: ತಾಲ್ಲೂಕಿನ ಬಿಡದಿ ಹೋಬಳಿಯ ಚೌಕಹಳ್ಳಿ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ವೃಷಭಾವತಿ ನದಿಗೆ ಯುವಕನೊಬ್ಬ ಆಯ ತಪ್ಪಿ ಬಿದ್ದು ಕೊಚ್ಚಿ ಹೋಗಿದ್ದಾನೆ.

ಚೌಕಹಳ್ಳಿ ನಿವಾಸಿ ಕೌಶಿಕ್ ರೆಡ್ಡಿ (26) ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆದಿದೆ. ಕೌಶಿಕ್ ಬೆಳಿಗ್ಗೆ 7.30ರ ಸಮಯದಲ್ಲಿ ವಾಕಿಂಗ್ ಮುಗಿಸಿಕೊಂಡು ಬಂದು ಸೇತುವೆ ಮೇಲೆ ಕುಳಿತುಕೊಳ್ಳುವಾಗ ಆಯತಪ್ಪಿ ವೃಷಭಾವತಿ ನದಿಗೆ ಬಿದ್ದಿದ್ದಾನೆ ಎನ್ನಲಾಗಿದೆ.

ಬೆಂಗಳೂರಿನ ಕೆಲವೆಡೆ ಶನಿವಾರ ರಾತ್ರಿ ಉತ್ತಮ ಮಳೆಯಾದ ಕಾರಣ ವೃಷಭಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಯುವಕನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.