ADVERTISEMENT

ರಾಮನಗರ: ಔಷಧ ವಿತರಣೆ ಮಾಡಿದ ಸಚಿವ ಎಸ್.ಟಿ. ಸೋಮಶೇಖರ್ 

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2020, 5:23 IST
Last Updated 21 ಏಪ್ರಿಲ್ 2020, 5:23 IST
ಸಚಿವ ಎಸ್.ಟಿ. ಸೋಮಶೇಖರ್ ಅವರಿಂದ ಔಷಧ ವಿತರಣೆ
ಸಚಿವ ಎಸ್.ಟಿ. ಸೋಮಶೇಖರ್ ಅವರಿಂದ ಔಷಧ ವಿತರಣೆ   

ರಾಮನಗರ: ನಗರದ ಕೆಂಪೇಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಜನರಿಗೆ ಅಗತ್ಯವಾದ ಔಷಧಗಳನ್ನು ವಿತರಿಸಿದರು.

'ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಔಷಧಗಳ ಕೊರತೆ ಉಂಟಾಗಬಹುದು. ಇದನ್ನು ಅರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಜನರಿಗೆ ಉಚಿತವಾಗಿ ಔಷಧ ವಿತರಣೆ ಕಾರ್ಯಕ್ರಮ ರೂಪಿಸಿದ್ದಾರೆ. ಈಗಾಗಲೇ ಇದರಿಂದ ಸಾವಿರಾರು ಜನರಿಗೆ ಅನುಕೂಲ ಆಗಿದೆ' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.‌ ಆದರೆ ಇದು ಪಕ್ಷದ ಕಾರ್ಯಕ್ರಮ ಅಲ್ಲ ಎಂದೂ ಅವರು ಸ್ಪಷ್ಟನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT