ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಮಲ್ಲಂಗೆರೆ ಗ್ರಾಮದ ಸಮೀಪದ ತೋಟದಲ್ಲಿ ಕಾಡಾನೆಯೊಂದು ಶುಕ್ರವಾರ ಮೃತಪಟ್ಟಿದೆ.
ಸುಮಾರು 35-40 ವರ್ಷ ಪ್ರಾಯದ ಕಾಡಾನೆ ಇದಾಗಿದೆ. ನಸುಕಿನಲ್ಲಿ ತೋಟದಲ್ಲಿನ ಬೆಳೆ ಮೇಯಲು ಆನೆಗಳ ಹಿಂಡು ಬಂದಿತ್ತು.ಈ ಸಂದರ್ಭ ವಿದ್ಯುತ್ ಸ್ಪರ್ಶದಿಂದ ಆನೆ ಮೃತಪಟ್ಟಿದೆ ಎನ್ನಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.