ರಾಮನಗರ: ಕ್ವಾರಂಟೈನ್ ಕೇಂದ್ರದ ನಿರ್ವಹಣೆಯಲ್ಲಿ ಲೋಪ ತೋರಿದ ಆರೋಪದ ಮೇಲೆ ತಾಲ್ಲೂಕಿನ ಕೆಂಪೇಗೌಡನದೊಡ್ಡಿಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಯೋಗೇಶ್ ಸೇವೆಯಿಂದ ಅಮಾನತುಗೊಂಡಿದ್ದಾರೆ.
ಅವರನ್ನು ಇದೇ ತಿಂಗಳ 1ರಿಂದ 7ರವರೆಗೆ ಗ್ರಾಮದ ಕ್ವಾರಂಟೈನ್ ಕೇಂದ್ರದ ನಿರ್ವಹಣೆಗೆ ನಿಯೋಜಿಸಲಾಗಿತ್ತು. ಆದರೆ ಕೇವಲ ಒಂದು ದಿನ ಮಾತ್ರ ಕರ್ತವ್ಯಕ್ಕೆ ಹಾಜರಾಗಿದ್ದ ಯೋಗೇಶ್ ಉಳಿದ ದಿನಗಳಂದು ಗೈರಾಗಿದ್ದರು. ಇದರಿಂದಾಗಿ ಕೇಂದ್ರದಲ್ಲಿ ಕ್ವಾರಂಟೈನ್ಗೆ ಒಳಗಾಗಿದ್ದ ಜನರಿಗೆ ಆಹಾರ ಹಾಗೂ ಔಷದೋಪಚಾರದಲ್ಲಿ ವ್ಯತ್ಯಯ ಆಗಿತ್ತು. ತಹಶೀಲ್ದಾರ್ ಭೇಟಿ ಸಂದರ್ಭವೂ ಅವರು ಗೈರಾಗಿದ್ದರು.
ಈ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಆದೇಶ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.