ರಾಮನಗರ: ಜಿಲ್ಲೆಯಿಂದ ನೆರೆಯ ಜಿಲ್ಲೆಗಳಿಗೆ ಮಂಗಳವಾರ ಮುಂಜಾನೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಗೊಂಡಿದೆ.
ಸದ್ಯ ರಾಮನಗರದಿಂದ ಬೆಂಗಳೂರಿನ ಸ್ಯಾಟಲೈಟ್ ನಿಲ್ದಾಣಕ್ಕೆ ಬಸ್ ಸಂಚಾರ ಆರಂಭವಾಗಿದ್ದು, ಒಂದು ಬಸ್ನಲ್ಲಿ 30 ಮಂದಿಗಷ್ಟೇ ಅವಕಾಶ ನೀಡಲಾಗಿದೆ. ಮಧ್ಯೆ ನಿಲುಗಡೆ ಇಲ್ಲ. ಬಸ್ ಏರುವ ಮುನ್ನ ಪ್ರತಿ ಪ್ರಯಾಣಿಕನನ್ನೂ ಥರ್ಮಲ್ ಸ್ಕ್ಯಾನಿಂಗ್ಗೆಒಳಪಡಿಸಿ, ಅವರ ಮಾಹಿತಿ ಪಡೆದು ನಿಲ್ದಾಣದಲ್ಲೇ ಟಿಕೆಟ್ ನೀಡಲಾಗುತ್ತಿದೆ.
ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಮಂಡ್ಯ, ಮೈಸೂರು ಭಾಗಕ್ಕೆ ಬಸ್ ಸಂಚಾರ ಕಲ್ಪಿಸುವುದಾಗಿ ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.