ರಾಮನಗರ: ಇ.ಡಿ. ವಶದಲ್ಲಿ ಇರುವ ಶಾಸಕ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ದೆಹಲಿಯಲ್ಲಿನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರತಿಭಟನೆಗಳು ನಡೆಯುವ ಮುನ್ನೆಚ್ಚರಿಕಾಕ್ರಮವಾಗಿ ಪೊಲೀಸರು ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
1 ಎಸ್ಪಿ, 5 ಡಿವೈಎಸ್ಪಿ, 10 ಸರ್ಕಲ್ ಇನ್ ಸ್ಪೆಕ್ಟರ್, 21 ಎಸ್ ಐ, 50 ಎ ಎಸ್ ಐ, 400 ಕಾನ್ ಸ್ಟೆಬಲ್ ಹಾಗೂ ತಲಾ 4 ಡಿಎಆರ್, ಕೆ ಎಸ್ ಆರ್ ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.
‘ಜಿಲ್ಲೆಯಲ್ಲಿ ಯಾವುದೇ ಪ್ರತಿಭಟನೆಗೆ ಅನುಮತಿ ನೀಡಿಲ್ಲ. ಗಲಾಟೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಅನೂಪ್ ಶೆಟ್ಟಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.