ರಾಮನಗರ: ಯುಗಾದಿ ವರ್ಷದ ತೊಡಕಿನ ಅಂಗವಾಗಿ ಜಿಲ್ಲೆಯಾದ್ಯಂತ ಮಾಂಸ ಮಾರಾಟಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.
ಮಾಂಸದ ಅಂಗಡಿಗಳ ಮುಂಭಾಗ ಪೊಲೀಸರು ಗೆರೆಗಳನ್ನು ಹಾಕಿದ್ದಾರೆ. ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಂಸ ಖರೀದಿ ಮಾಡುತ್ತಿದ್ದಾರೆ. ಪೊಲೀಸರ ಕಣ್ಗಾವಲು ಇದೆ.
ಬಂದ್ ಹಿನ್ನೆಲೆಯಲ್ಲಿ ಮಾಂಸದ ಬೆಲೆಯೂ ಏರಿಕೆ ಆಗಿದೆ. ಪ್ರತಿ ಕೆ.ಜಿ.ಗೆ 700-800 ರವೆರೆಗೂ ಮಾರಾಟ ನಡೆದಿದೆ. ಗ್ರಾಮೀಣ ಪ್ರದೇಶದಲ್ಲಿ ಬುಧವಾರ ರಾತ್ರಿಯೇ ಗುಡ್ಡೆಬಾಡು ಮಾರಾಟ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.