ADVERTISEMENT

ಸಿಲಿಂಡರ್ ಪ್ರಕರಣ: ಜಿಲ್ಲಾಧಿಕಾರಿಗೆ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 12:40 IST
Last Updated 6 ಜೂನ್ 2020, 12:40 IST

ರಾಮನಗರ: ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರು ಖಾಸಗಿ ಆಸ್ಪತ್ರೆಯ ಆಮ್ಲಜನಕ ಸಿಲಿಂಡರ್‌ಗಳನ್ನು ತಂದಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್‌ ತನಿಖೆ ನಡೆಸಿದ್ದು, ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ.

ಮೂರ್ನಾಲ್ಕು ದಿನಗಳ ಹಿಂದೆಯೇ ಡಿಎಚ್‌ಒ ತಮ್ಮ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದಾರೆ. ಪ್ರಕರಣದ ಅರೋಪಿಯಾಗಿರುವ ಶಶಿಧರ್‌ ಅವರು ತಮ್ಮ ಪತ್ನಿ ಒಡೆತನದ ಖಾಸಗಿ ಆಸ್ಪತ್ರೆಯ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಇರಿಸುವ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಶಸ್ತ್ರಚಿಕಿತ್ಸಕರು ಖಾಸಗಿ ಆಸ್ಪತ್ರೆಯ ಸಿಲಿಂಡರ್‌ಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಿದ ಕುರಿತು "ಪ್ರಜಾವಾಣಿ’ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT