ಮಾಗಡಿ: ಹೊಸಪಾಳ್ಯದ ಗ್ರಾಮೀಣ ವಸತಿ ಪ್ರೌಢಶಾಲೆ ವಾರ್ಷಿಕೋತ್ಸವ ಹಾಗೂ ಮಕ್ಕಳಿಂದ ‘ಕುರುಕ್ಷೇತ್ರ’ ನಾಟಕ ಪ್ರದರ್ಶನ ನಡೆಯಲಿದೆ.
ಹುಲಿಕಟ್ಟೆ ಗ್ರಾಮೀಣ ವಸತಿ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಸಿ.ಬಾಲಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಸದಸ್ಯ ಎಚ್,ಎನ್,ಅಶೋಕ್ ಉದ್ಘಾಟಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದೇಶ್ವರ.ಎಸ್. ಬಹುಮಾನ ವಿತರಿಸುವರು. ಕನ್ನಡ ಸಹೃದಯ ಬಳಗದ ಅಧ್ಯಕ್ಷ ಹಾಗೂ ಇತಿಹಾಸ ಸಂಶೋಧಕ ಡಾ.ಮುನಿರಾಜಪ್ಪ, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಸಿ.ಬಿ.ಅಶೋಕ್, ನಿವೃತ್ತ ಮುಖ್ಯಶಿಕ್ಷಕ ಎಚ್.ಹೊನ್ನಗಂಗಯ್ಯ, ತಾಲ್ಲೂಕು ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಹೊಸಪಾಳ್ಯ ಲೋಕೇಶ್, ಕಾಂಗ್ರೆಸ್ ಮುಖಂಡ ಎಂ.ಕೆ.ಧನಂಜಯ, ಜೆ.ಆರ್.ರವೀಶ್, ರಂಗಶಾಮಯ್ಯ ಭಾಗವಹಿಸಲಿದ್ದಾರೆ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಸ್.ವೆಂಕಟೇಶಯ್ಯ ಅವರನ್ನು ಸನ್ಮಾನಿಸಲಾಗುವುದುಎಂದು ಮುಖ್ಯಶಿಕ್ಷಕ ವೆಂಕಟೇಶಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.