ADVERTISEMENT

ಸಮಾಧಿ ಸ್ಥಿತಿ ತಲುಪಿದರೇ ನಿತ್ಯಾನಂದ?

​ಪ್ರಜಾವಾಣಿ ವಾರ್ತೆ
Published 12 ಮೇ 2022, 9:33 IST
Last Updated 12 ಮೇ 2022, 9:33 IST
   

ರಾಮನಗರ: ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿ ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ನಿರಂತರ ಧ್ಯಾನದಲ್ಲಿ ನಿರತರಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೈಲಾಸ ಪೀಠ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ಈ ಸಂಬಂಧ ಪೋಸ್ಟ್ ಹಾಕಲಾಗಿದ್ದು, ಅಲ್ಲಿ ನಿತ್ಯಾನಂದರ ಸಂದೇಶಗಳನ್ನು ಬರೆಯಲಾಗಿದೆ. ನಿತ್ಯಾನಂದ ಕೈ ಬರಹ ಇರುವ ಫೋಟೊ ಸಹ ಇದೆ. ‘ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ’ ಎಂದು ಅದರಲ್ಲಿ ಬರೆಯಲಾಗಿದೆ.

‘ನಾನು ಈಗಾಗಲೇ ಸತ್ತು ಹೋಗಿದ್ದೇನೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಅದೆಲ್ಲ ಸುಳ್ಳು. ಈಗಲೂ 27 ವೈದ್ಯರ ತಂಡ ನನ್ನನ್ನು ನೋಡಿಕೊಳ್ಳುತ್ತಿದೆ. ಸಮಾಧಿ ಸ್ಥಿತಿಯಲ್ಲಿದ್ದರೂ ನಿತ್ಯ ಶಿವ ಪೂಜೆ ಮಾಡುವುದನ್ನು ಬಿಟ್ಟಿಲ್ಲ. ಆದರೆ ನೀರು–ಆಹಾರ ಸ್ವೀಕರಿಸುತ್ತಿಲ್ಲ’ ಎಂದೂ ನಿತ್ಯಾನಂದ ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.