ADVERTISEMENT

ಕಾಡಳ್ಳಿ ಸಿದ್ದೇಗೌಡಗೆ ಸೇವಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2018, 13:24 IST
Last Updated 12 ಡಿಸೆಂಬರ್ 2018, 13:24 IST
ಕನಕಪುರ ಸಿದ್ದೇಗೌಡ ಅವರಿಗೆ ವಿಧಾನ ಪರಿಷತ್ ಸದಸ್ಯ ಎಸ್‌.ರವಿ ಸೇವಾ ಪುರಸ್ಕಾರ ಪ್ರದಾನ ಮಾಡಿದರು. ಮಹಮ್ಮದ್‌ ಏಜಾಸ್‌ ಇದ್ದರು.
ಕನಕಪುರ ಸಿದ್ದೇಗೌಡ ಅವರಿಗೆ ವಿಧಾನ ಪರಿಷತ್ ಸದಸ್ಯ ಎಸ್‌.ರವಿ ಸೇವಾ ಪುರಸ್ಕಾರ ಪ್ರದಾನ ಮಾಡಿದರು. ಮಹಮ್ಮದ್‌ ಏಜಾಸ್‌ ಇದ್ದರು.   

ಕನಕಪುರ: ಶ್ರೀರಮಣ ಮಹರ್ಷಿ ಅಂಧರ ಸಂಸ್ಥೆಯಲ್ಲಿ 25ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿರುವ ತಾಲ್ಲೂಕಿನ ಸಾತನೂರು ಹೋಬಳಿ ಕಾಡಳ್ಳಿ ಗ್ರಾಮದ ಸಿದ್ದೇಗೌಡ ಅವರಿಗೆ ಈಚೆಗೆ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಹಾರೋಹಳ್ಳಿ ಮಂಜುನಾಥ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವ ಅಂಗವಿಕಲರ ದಿನಾಚರಣೆ ಮತ್ತು ಸೇವಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ ಪ್ರಶಸ್ತಿ ಪ್ರದಾನ ಮಾಡಿದರು.

ಸಿದ್ದೇಗೌಡ ಅವರು ಶ್ರೀರಮಣ ಮಹರ್ಷಿ ಅಂಧರ ಸಂಸ್ಥೆಯಲ್ಲಿ ಯೋಜನಾ ಸಂಯೋಜಕರಾಗಿ 1992ರಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಜಿಲ್ಲಾ ಮಟ್ಟದಲ್ಲಿ ನೀಡಲಾಗುವ ಹಲವು ಪ್ರಶಸ್ತಿಗಳಿಗೂ ಅವರು ಭಾಜನರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.