ADVERTISEMENT

ರಾಮನಗರ: ಏಳು ಜನ ಆತ್ಮಹತ್ಯೆ ಯತ್ನ, ಮಹಿಳೆ ಸಾವು

ಸಾಲಬಾಧೆಯಿಂದ ಊಟದಲ್ಲಿ ವಿಷ ಬೆರೆಸಿಕೊಂಡ ಕುಟುಂಬ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 4:52 IST
Last Updated 3 ಫೆಬ್ರುವರಿ 2023, 4:52 IST

ರಾಮನಗರ: ತಾಲ್ಲೂಕಿನ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಸಾಲಬಾಧೆಯಿಂದ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಗುರುವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು, ಇವರ ಪೈಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮಂಗಳಮ್ಮ (28) ಮೃತ ಮಹಿಳೆ. ಮೃತರ ಪತಿ ರಾಜು, ತಾಯಿ ಸೊಲ್ಲಾಪುರದಮ್ಮ, ಸಹೋದರಿ ಸವಿತಾ, ಮಕ್ಕಳಾದ ಆಕಾಶ್, ಕೃಷ್ಣ, ದರ್ಶಿನಿ ಎಂಬುವರು ಅಸ್ವಸ್ತಗೊಂಡಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಎಲ್ಲರೂ ಗುರುವಾರ ರಾತ್ರಿ ಊಟದಲ್ಲಿ ವಿಷ ಬೆರೆಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.