ರಾಮನಗರ: ಇಲ್ಲಿನ ರೋಟರಿ ಆಸ್ಪತ್ರೆ ಹಿಂಭಾಗದ ಮೂರನೇ ಅಡ್ಡ ರಸ್ತೆಯಲ್ಲಿ ಒಳಚರಂಡಿ ಮ್ಯಾನ್ಹೋಲ್ ಉಕ್ಕಿದ್ದು, ಕೊಳಕು ನೀರು ರಸ್ತೆಗೆ ಹರಿಯುತ್ತಿದೆ.
ಇದರಿಂದ ಸುತ್ತಮುತ್ತ ವಾಸಿಸುವ ಜನರು ಕಲುಷಿತ ನೀರಿನ ದುರ್ವಾಸನೆಯಿಂದ ಬೇಸತ್ತಿದ್ದು, ಮನೆಯಲ್ಲಿ ಇರಲಾಗದ ಪರಿಸ್ಥಿತಿ ಇದೆ. ಕೆಲವು ದಿನದ ಹಿಂದೆ ಈ ಬಗ್ಗೆ ಜಲಮಂಡಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಚೇಂಬರ್ ನಿಂದ ಒಂದು ಪೈಪ್ ಹಾಕಿ ರಾಜ ಕಾಲುವೆಗೆ ಸಂಪರ್ಕ ಕಲ್ಪಿಸಿ ಕೈ ತೊಳೆದುಕೊಂಡರು. ಆದರೆ ಈಚೆಗೆ ಸುರಿದ ಮಳೆಯಿಂದಾಗಿ ಚೇಂಬರ್ ಕಟ್ಟಿಕೊಂಡು ಕಲುಷಿತ ನೀರು ರಸ್ತೆ ಮಧ್ಯದಲ್ಲಿ ಹರಿಯುತ್ತಿದೆ. ಇದರ ದುರ್ವಾಸನೆ ತಾಳಲು ಆಗದು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದರು. ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಬೇಕೆಂದು ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.