ರಾಮನಗರ: ಅನಾರೋಗ್ಯದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾನುವಾರ ಪಾದಯಾತ್ರೆಯನ್ನು ಅರ್ಧಕ್ಕೆ ನಿಲ್ಲಿಸಿ ವಿಶ್ರಾಂತಿಗೆಂದು ತೆರಳಿದರು.
ಬೆಳಿಗ್ಗೆ 11.30ಕ್ಕೆ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಆರಂಭಿಸಿದ ಅವರು ಹೆಗ್ಗನೂರುವರೆಗೆ ಸುಮಾರು ಏಳು ಕಿ.ಮೀ. ಕ್ರಮಿಸಿದ್ದರು.
ಆ ವೇಳೆ ಸಣ್ಣಗೆ ಜ್ವರ ಕಾಣಿಸಿಕೊಂಡ ಕಾರಣ ಅಲ್ಲಿಂದ ದೊಡ್ಡಾಲಹಳ್ಳಿಗೆ ತೆರಳಿದರು. ಸಂಜೆ ಅಲ್ಲಿಂದ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ.
ಶನಿವಾರವಷ್ಟೇ ಸಿದ್ದರಾಮಯ್ಯ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಪಡೆದಿದ್ದು, ಇದರಿಂದ ಜ್ವರ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.