ADVERTISEMENT

ಮಾಗಡಿ: ಗಂಗಮ್ಮ ಮನೆಗೆ ಡಿಸಿಎಂ ಭೇಟಿ; ‍ಪರಿಹಾರ ವಿತರಣೆ

​ಪ್ರಜಾವಾಣಿ ವಾರ್ತೆ
Published 22 ಮೇ 2020, 15:23 IST
Last Updated 22 ಮೇ 2020, 15:23 IST
ಚಿರತೆಗೆ ಬಲಿಯಾದ ಗಂಗಮ್ಮ ಅವರ ಮನೆಗೆ ಭೇಟಿ ನೀಡಿದ್ದ ಡಿಸಿಎಂ ಡಾ.ಅಶ್ವತ್ಥನಾರಾಯಣ ಮೃತರ ಕುಟುಂಬ ಸದಸ್ಯರಿಗೆ ಪರಿಹಾರ ವಿತರಿಸಿದರು. ಎನ್‌.ಗಂಗರಾಜು, ಸಿ.ಆರ್‌.ಗೌಡ ಇದ್ದರು
ಚಿರತೆಗೆ ಬಲಿಯಾದ ಗಂಗಮ್ಮ ಅವರ ಮನೆಗೆ ಭೇಟಿ ನೀಡಿದ್ದ ಡಿಸಿಎಂ ಡಾ.ಅಶ್ವತ್ಥನಾರಾಯಣ ಮೃತರ ಕುಟುಂಬ ಸದಸ್ಯರಿಗೆ ಪರಿಹಾರ ವಿತರಿಸಿದರು. ಎನ್‌.ಗಂಗರಾಜು, ಸಿ.ಆರ್‌.ಗೌಡ ಇದ್ದರು   

ಮಾಗಡಿ: ಮೇ15ರಂದು ಚಿರತೆಗೆ ಬಲಿಯಾದ ಗಂಗಮ್ಮ ಅವರ ಮನೆಗೆ ಶುಕ್ರವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಭೇಟಿ ನೀಡಿ ಮೃತರ ಬಂಧುಗಳಿಗೆ ಸಾಂತ್ವನ ಹೇಳಿದರು.

ಸರ್ಕಾರದಿಂದ ನೀಡಿರುವ ₹7.5ಲಕ್ಷ ಪರಿಹಾರ ಹಣವನ್ನು ಕುಟುಂಬ ಸದಸ್ಯರಿಗೆ ನೀಡಿದರು. ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಆರ್‌ಗೌಡ, ಭೂಬ್ಯಾಂಕಿನ ಮಾಜಿ ಅಧ್ಯಕ್ಷ ಎನ್‌.ಗಂಗರಾಜು, ತಾ.ಪಂ.ಮಾಜಿ ಸದಸ್ಯ ಕಾಂತರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT