ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಸೋಮನಾಥಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶಿವಸ್ವಾಮಿ, ಉಪಾಧ್ಯಕ್ಷರಾಗಿ ಮಹದೇವಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದ ಕಾರಣ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ನಿರ್ದೇಶಕರಾದ ಶಿವಶೇಖರ್, ಶಿವಕುಮಾರ್, ಕರಿಮಾದಶೆಟ್ಟಿ, ರೇವಣ್ಣ, ರಾಜಶೆಟ್ಟಿ, ಕಲಾವತಿ, ದೊಡ್ಡಸಿದ್ದಮ್ಮ, ವಿರುಪಾಕ್ಷ, ಮುತ್ತುರಾಜು ಹಾಗೂ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ್, ಶಿವಣ್ಣ, ಗ್ರಾಮದ ಮುಖಂಡರಾದ ಎಸ್.ಎಂ. ಪ್ರಕಾಶ್, ಪರಮೇಶ್, ಸಂತೋಷ, ಎಸ್.ಇ.ನಾಗೇಶ್, ನಾಗಶೆಟ್ಟಿ, ಎಸ್.ಎನ್.ವೀರೇಗೌಡ, ಎಸ್.ಸಿ.ನಾಗೇಶ್, ಚಂದ್ರು, ಅಮ್ಮಳ್ಳಿದೊಡ್ಡಿ ಪುಟ್ಟೇಗೌಡ, ರಘುಕುಮಾರ್ ಅಭಿನಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.