ADVERTISEMENT

ರಾಮನಗರ: ಮಂಡ್ಯದಲ್ಲಿ ನಿಖಿಲ್‌ ಗೆಲುವಿಗಾಗಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 21 ಮೇ 2019, 12:08 IST
Last Updated 21 ಮೇ 2019, 12:08 IST
ಕುಮಾರಣ್ಣ ಅಭಿಮಾನಿ ಬಳಗದ ಸದಸ್ಯರು ಮಂಗಳವಾರ ಚಾಮುಂಡೇಶ್ವರಿ ದೇವಾಲಯದ ಮುಂಭಾಗ ಈಡುಗಾಯಿ ಒಡೆದರು
ಕುಮಾರಣ್ಣ ಅಭಿಮಾನಿ ಬಳಗದ ಸದಸ್ಯರು ಮಂಗಳವಾರ ಚಾಮುಂಡೇಶ್ವರಿ ದೇವಾಲಯದ ಮುಂಭಾಗ ಈಡುಗಾಯಿ ಒಡೆದರು   

ರಾಮನಗರ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಗೆಲುವಿಗೆ ಪ್ರಾರ್ಥಿಸಿ ಕುಮಾರಣ್ಣ ಅಭಿಮಾನಿ ಬಳಗದ ಸದಸ್ಯರು ಮಂಗಳವಾರ ಇಲ್ಲಿನ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ 101 ಈಡುಗಾಯಿ ಒಡೆದರು.

ಜೆಡಿಎಸ್ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಮಾತನಾಡಿ, ನಿಖಿಲ್ ಜನಾನುರಾಗಿ ನಾಯಕರಾಗಿ, ಮಂಡ್ಯ ಜನರ ಧ್ವನಿಯಾಗಿ ಲೋಕಸಭೆಗೆ ಆಯ್ಕೆಯಾಗಲಿ ಎಂಬ ಕಾರಣಕ್ಕೆ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು ಎಂದರು.

ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್. ಜಯಕುಮಾರ್, ವಿದ್ಯಾರ್ಥಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಕ್ಕಿ ಉಲ್ಲಾ ಖಾನ್, ಸೇವಾದಳ ಘಟಕದ ಜಿಲ್ಲಾ ಅಧ್ಯಕ್ಷ ಯೋಗೇಶ್ ಕುಮಾರ್, ಜೆಡಿಎಸ್ ವಿದ್ಯಾರ್ಥಿ ಘಟಕದ ಜಿಲ್ಲಾ ಉಪಾಧ್ಯಕ್ಷ ಪಿ. ರಘು, ಹಿರಿಯರಾದ ಹನುಮಯ್ಯ, ಶಿವಾಜಿ ರಾವ್, ಜೆಡಿಎಸ್ ಮುಖಂಡ ರಮೇಶ್, ಸಿ.ಎಸ್.ರಾಜು, ಪ್ರಭ, ಅರುಣ್ ಕುಮಾರ್, ಶಿವಲಿಂಗಯ್ಯ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.