ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮ: ಮತ್ತಷ್ಟು ಮಂದಿ ವಶಕ್ಕೆ?

​ಪ್ರಜಾವಾಣಿ ವಾರ್ತೆ
Published 25 ಮೇ 2022, 8:44 IST
Last Updated 25 ಮೇ 2022, 8:44 IST
   

ರಾಮನಗರ: ಮಾಗಡಿಯ ಪರೀಕ್ಷಾ ಕೇಂದ್ರವೊಂದರಲ್ಲಿ‌ ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ಒಟ್ಟು ಏಳು ಮಂದಿಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಕೆಂಪೇಗೌಡ ಶಾಲೆಯ ಕ್ಲರ್ಕ್ ರಂಗನಾಥ‌ ಜೊತೆಗೆ ಪರೀಕ್ಷಾ‌ ಕೇಂದ್ರದ ಮೇಲ್ವಿಚಾರಕರು, ಐವರು ವಿಷಯ ತಜ್ಞರನ್ನು ಪೊಲೀಸರು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಅಲ್ಲದೆ ಮಾಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯನ್ನೂ‌ ಪೊಲೀಸರು ಈಗಾಗಲೇ ವಿಚಾರಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT