ADVERTISEMENT

ಚನ್ನಪಟ್ಟಣ | ಬೀದಿನಾಯಿ ದಾಳಿ: 9 ಕುರಿ ಸಾವು

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2023, 5:15 IST
Last Updated 21 ಡಿಸೆಂಬರ್ 2023, 5:15 IST
ಚನ್ನಪಟ್ಟಣ ತಾಲ್ಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ಬೀದಿನಾಯಿಗಳ ದಾಳಿಯಿಂದ ಸಾವಿಗೀಡಾಗಿರುವ ಕುರಿಗಳು
ಚನ್ನಪಟ್ಟಣ ತಾಲ್ಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ಬೀದಿನಾಯಿಗಳ ದಾಳಿಯಿಂದ ಸಾವಿಗೀಡಾಗಿರುವ ಕುರಿಗಳು   

ಚನ್ನಪಟ್ಟಣ: ತಾಲ್ಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಬೀದಿನಾಯಿ ದಾಳಿ ನಡೆಸಿ 9 ಕುರಿಗಳನ್ನು ಕೊಂದಿವೆ.

ಗ್ರಾಮದ ಸಿದ್ದಲಿಂಗೇಗೌಡ ಅವರ ಕೊಟ್ಟಿಗೆಯಲ್ಲಿ ಕೂಡಿಹಾಕಿದ್ದ 12 ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿತ್ತು. ಇವುಗಳಲ್ಲಿ 9 ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ. ಮೂರು ಕುರಿಗಳು ಗಂಭೀರವಾಗಿ ಗಾಯಗೊಂಡಿವೆ.

ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, 20ರಿಂದ 30 ಬೀದಿ ನಾಯಿಗಳ ಗುಂಪು ಬೀಡು ಬಿಟ್ಟಿವೆ. ಇವು ಕುರಿ, ಮೇಕೆ ಹಾಗೂ ಜನರ ಮೇಲೆ ದಾಳಿ ಮಾಡುತ್ತಿವೆ. ಇವುಗಳ ಕಾಟಕ್ಕೆ ಅಧಿಕಾರಿಗಳು ಕಡಿವಾಣ ಹಾಕಬೇಕು. ಕುರಿಗಳನ್ನು ಕಳೆದುಕೊಂಡಿರುವ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.