ರಾಮನಗರ: ತಾಲ್ಲೂಕಿನ ಕೈಲಾಂಚ ಗ್ರಾಮದಲ್ಲಿರುವ ಅಂಬೇಡ್ಕರ್ ವಸತಿ ಶಾಲೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ವಸತಿ ಶಾಲೆಯ ತರಗತಿಗಳನ್ನು ಗ್ರಾಮದ ಸರ್ಕಾರಿ ಶಾಲೆಗೆ ಹಾಗೂ ಬಾಲಕರನ್ನು ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಸ್ಥಳಾಂತರಿಸಬೇಕು. ವಿದ್ಯಾರ್ಥಿಗಳಿಗೆ ಸ್ನಾನಕ್ಕೆ ಬಿಸಿ ನೀರು, ಕುಡಿಯಲು ಶುದ್ಧ ನೀರು, ಸಮವಸ್ತ್ರದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಇದನ್ನೂ ಓದಿ:ಕಜ್ಜಿ, ತುರಿಕೆ: ಸುಸ್ತಾದ ವಿದ್ಯಾರ್ಥಿಗಳು
ವಸತಿ ಶಾಲೆಯಲ್ಲಿನ ಅವ್ಯವಸ್ಥೆ ಕುರಿತು ಪ್ರಜಾವಾಣಿಯಲ್ಲಿ ವರದಿ ಓದಿ ಬೇಸರವಾಯಿತು. ಯಾವ ಮಕ್ಕಳಿಗೂ ಇಂತಹ ಪರಿಸ್ಥಿತಿ ಬರಬಾರದು. ಮಕ್ಕಳಿಗೆ ಸೂಕ್ತ ವೈದ್ಯೋಪಚಾರ ಮಾಡುವಂತೆ ಸೂಚಿಸಿದ್ದೇನೆ. ಅಧಿಕಾರಿಗಳಿಂದ ವರದಿ ಪಡೆದು ಸಮಾಜ ಕಲ್ಯಾಣ ಇಲಾಖೆ ಸಚಿವರ ಗಮನಕ್ಕೆ ತಂದು ಕ್ರಮ ಜರುಗಿಸುತ್ತೇನೆ. ಪೋಷಕರು ಭಯ ಪಡಬಾರದು ಎಂದು ಭರವಸೆ ನೀಡಿದರು.
ನಂತರ ಅವರು ಸರ್ಕಾರಿ ಶಾಲೆ, ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.