ADVERTISEMENT

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಟಿ.ರವೀಂದ್ರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2019, 14:34 IST
Last Updated 25 ಆಗಸ್ಟ್ 2019, 14:34 IST
ಚನ್ನಪಟ್ಟಣದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಟಿ.ರವೀಂದ್ರ ಹಾಗೂ ಇತರರಿಗೆ ಪ್ರಮಾಣ ಪತ್ರ ವಿತರಿಸಲಾಯಿತು
ಚನ್ನಪಟ್ಟಣದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಟಿ.ರವೀಂದ್ರ ಹಾಗೂ ಇತರರಿಗೆ ಪ್ರಮಾಣ ಪತ್ರ ವಿತರಿಸಲಾಯಿತು   

ಚನ್ನಪಟ್ಟಣ: ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಟಿ.ರವೀಂದ್ರ ಆಯ್ಕೆಯಾದರು.

ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ದೈಹಿಕ ಶಿಕ್ಷಣಾಧಿಕಾರಿ ನರಸಿಂಹಯ್ಯ ಕಾರ್ಯ ನಿರ್ವಹಿಸಿದರು.

ಪ್ರಧಾನ ಕಾರ್ಯದರ್ಶಿಯಾಗಿ ಎಸ್.ವೀರಾಜು, ಖಜಾಂಚಿಯಾಗಿ ವೈ.ಕೆ. ಸುಧಾ, ಸಹ ಕಾರ್ಯದರ್ಶಿಯಾಗಿ ಎ.ಎಂ. ಆನಂದ್, ಸಹ ಸಂಘಟನಾ ಕಾರ್ಯದರ್ಶಿಯಾಗಿ ವಿಜಯಕಾಂತ್ ಆಯ್ಕೆಯಾದರು.

ADVERTISEMENT

ನೂತನ ಅಧ್ಯಕ್ಷ ರವೀಂದ್ರ ಮಾತನಾಡಿ, ‘ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆಗಳಿಗೆ, ಪ್ರತಿಯೊಬ್ಬರ ಸಹಕಾರ ಪಡೆದು ಸ್ಪಂದಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.