ರಾಮನಗರ: ತಮ್ಮ ನೆಚ್ಚಿನ ನಟ, ನಾಯಕರ ಟ್ಯಾಟೂಗಳನ್ನು ಮೈ ಮೇಲೆ ಹಾಕಿಸಿಕೊಳ್ಳುವ ಅಭಿಮಾನಿಗಳ ಸಂಖ್ಯೆ ಬೆಳೆಯುತ್ತಿದೆ. ಈ ಮೂಲಕ ಟ್ಯಾಟು ವಾರ್ ಆರಂಭವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿನ ಹೊಂಬೇಗೌಡನದೊಡ್ಡಿ ಗ್ರಾಮದ ಯುವಕ ಚನ್ನೇಗೌಡ ಬೆನ್ನ ಮೇಲೆ ನಟ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಟ್ಯಾಟು ಹಾಕಿಸಿಕೊಂಡಿದ್ದಾರೆ. ಇತ್ತೀಚೆಗೆ ಅಭಿಮಾನಿಯೊಬ್ಬ ತನ್ನ ಬೆನ್ನ ಮೇಲೆ ನಟ ದರ್ಶನ್ ಅವರ ಟ್ಯಾಟು ಹಾಕಿಸಿಕೊಂಡಿದ್ದರು. ಮಂಡ್ಯದಲ್ಲಿ ಸುಮಲತಾ ಅವರ ಬೆಂಬಲಕ್ಕೆ ನಿಂತು ಅವರನ್ನು ಗೆಲ್ಲಿಸಿದ್ದು ಸೇರಿದಂತೆ, ದರ್ಶನ್ ಮೇಲಿನ ಅಭಿಮಾನಕ್ಕೆ ಟ್ಯಾಟು ಹಾಕಿಸಿಕೊಂಡಿದ್ದಾಗಿ ತಿಳಿಸಿದ್ದರು.
ಚನ್ನೇಗೌಡ ಅವರು ಮುನಿರತ್ನ ನಿರ್ಮಿಸುತ್ತಿರುವ ‘ಕುರುಕ್ಷೇತ್ರ’ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಕಾಣಿಸಿಕೊಂಡಿರುವ ಮಾದರಿಯಲ್ಲಿ ನಿಖಿಲ್ ಅವರ ಟ್ಯಾಟುವನ್ನು ಬೆನ್ನ ಮೇಲೆ ಹಾಕಿಸಿಕೊಂಡಿದ್ದಾರೆ. ನಿಖಿಲ್ ಟ್ಯಾಟು ಅಡಿಯಲ್ಲಿ ಯುವರಾಜ ನಿಖಿಲ್ ಗೌಡ ಎಂದು ಬರೆಸಿಕೊಂಡಿದ್ದಾರೆ. ಇಲ್ಲಿನ ಮಧು ಟ್ಯಾಟು ಸೆಂಟರ್ನಲ್ಲಿ ಸುಮಾರು ಏಳು ಗಂಟೆಗಳ ಕಾಲ ಇದನ್ನು ಬಿಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.