ADVERTISEMENT

ಲಾಲ್‌ ಬಹದ್ದೂರ್‌ ಶಾಸ್ತ್ರಿ ಕೊಡುಗೆ ಅನನ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 4:52 IST
Last Updated 3 ಅಕ್ಟೋಬರ್ 2021, 4:52 IST
ಚನ್ನಪಟ್ಟಣದ ಕನ್ನಡ ಮಾಧ್ಯಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಹಾತ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು, ತಾಲ್ಲೂಕು ವರ್ತಕರ ಸಂಘದ ಅಧ್ಯಕ್ಷ ಕಿಶೋರ್, ಪ್ರಧಾನ ಕಾರ್ಯದರ್ಶಿ ಸುರೇಶ್, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಶಿವಣ್ಣ, ಶಿಕ್ಷಣ ಸಂಯೋಜಕ ಚಕ್ಕೆರೆ ಯೋಗೇಶ್, ಗಂಗಾಧರಮೂರ್ತಿ, ಮುಖ್ಯಶಿಕ್ಷಕ ಮಲ್ಲಿಕಾರ್ಜುನಯ್ಯ ಭಾಗವಹಿಸಿದ್ದರು
ಚನ್ನಪಟ್ಟಣದ ಕನ್ನಡ ಮಾಧ್ಯಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಹಾತ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು, ತಾಲ್ಲೂಕು ವರ್ತಕರ ಸಂಘದ ಅಧ್ಯಕ್ಷ ಕಿಶೋರ್, ಪ್ರಧಾನ ಕಾರ್ಯದರ್ಶಿ ಸುರೇಶ್, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಶಿವಣ್ಣ, ಶಿಕ್ಷಣ ಸಂಯೋಜಕ ಚಕ್ಕೆರೆ ಯೋಗೇಶ್, ಗಂಗಾಧರಮೂರ್ತಿ, ಮುಖ್ಯಶಿಕ್ಷಕ ಮಲ್ಲಿಕಾರ್ಜುನಯ್ಯ ಭಾಗವಹಿಸಿದ್ದರು   

ಚನ್ನಪಟ್ಟಣ: ದೇಶದ ಪ್ರಗತಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕೊಡುಗೆ ಅನನ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು ಹೇಳಿದರು.

ಪಟ್ಟಣದ ಗುರು ಭವನದಲ್ಲಿ ಕನ್ನಡ ಮಾಧ್ಯಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಶಾಂತಿ ಮಂತ್ರದಿಂದಲೇ ಅವಿರತ ಹೋರಾಟ ನಡೆಸಿ ಬ್ರಿಟಿಷರನ್ನು ದೇಶದಿಂದಲೇ ಓಡಿಸಿದ ಗಾಂಧೀಜಿ ಅವರು ದೇಶ ಕಂಡ ಅಪ್ರತಿಮ ನಾಯಕರು. ಹಾಗೆಯೇ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಇಂದಿನ ರಾಜಕಾರಣಿಗಳಿಗೆ ಮಾದರಿ ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ತಾಲ್ಲೂಕು ವರ್ತಕರ ಸಂಘವು ಶಾಲೆಯ ಇಬ್ಬರು ಬಡ ಕುಟುಂಬದ ವಿದ್ಯಾರ್ಥಿನಿಯರನ್ನು ದತ್ತು ಪಡೆದು, ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್.ಎಸ್.ಎಲ್.ಸಿವರೆಗೆ ಶಿಕ್ಷಣ ಕೊಡಿಸಿ ಅವರ ಜೀವನೋಪಾಯಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.

ತಾಲ್ಲೂಕು ವರ್ತಕರ ಸಂಘದ ಅಧ್ಯಕ್ಷ ಕಿಶೋರ್, ಪ್ರಧಾನ ಕಾರ್ಯದರ್ಶಿ ಸುರೇಶ್, ಪದಾಧಿಕಾರಿಗಳಾದ ಪಾರ್ಥಸಾರಥಿ, ಪುರುಷೋತ್ತಮ್, ವಕೀಲ ಗುರುಮೂರ್ತಿ ಅವರನ್ನು ಶಾಲಾಯಿಂದ ಸನ್ಮಾನಿಸಲಾಯಿತು.

ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಶಿವಣ್ಣ, ಶಿಕ್ಷಣ ಸಂಯೋಜಕ ಚಕ್ಕೆರೆ ಯೋಗೇಶ್, ಗಂಗಾಧರಮೂರ್ತಿ, ಶಾಲೆಯ ಮುಖ್ಯಶಿಕ್ಷಕ ಮಲ್ಲಿಕಾರ್ಜುನಯ್ಯ, ದೈಹಿಕ ಶಿಕ್ಷಣ ಶಿಕ್ಷಕ ಸಂಗಮೇಶ ಹಿರೇಮಠ್, ಸಹ ಶಿಕ್ಷಕರಾದ ಕೃಷ್ಣಮ್ಮ, ಶ್ವೇತಾ, ಶ್ರೀದೇವಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.