ADVERTISEMENT

ಅಪರಿಚಿತ ವ್ಯಕ್ತಿ ಕೊಲೆ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 0:49 IST
Last Updated 25 ಜನವರಿ 2021, 0:49 IST
ಕೊಲೆ ಆರೋಪಿಯನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದರು
ಕೊಲೆ ಆರೋಪಿಯನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದರು   

ಕನಕಪುರ: ಅಪರಿಚಿತ ವ್ಯಕ್ತಿಯನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ ಆರೋಪಿ ಮತ್ತು ಕೊಲೆಯಾದ ಮೃತ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕಗ್ಗಲೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲ್ಲೂಕಿನ ಕಸಬಾ ಹೋಬಳಿಯ ಮಾದಾಪುರ ಗ್ರಾಮದ ಪುಟ್ಟಸ್ವಾಮಿ ಕೊಲೆಯಾದವರು.

ಕೊಲೆ ಮಾಡಿದ ಆರೋಪಿಯನ್ನು ಕಗ್ಗಲೀಪುರ ಸಂಕ್ರಾಂತಿ ವೆಂಚರ್ಸ್‌ ಲೇಔಟ್‌ನ ಕಾಂಕ್ರಿಟ್‌ ಗ್ಯಾಂಗ್‌ ಆಳುಗಳ ಜತೆ ಕೂಲಿ ಕೆಲಸ ಮಾಡುತ್ತಿದ್ದ ಬಾಪು ಡಾಂಗೆ ಅಲಿಯಾಸ್‌ ಕಾಶಿ ಕಿಶನ್‌ ಡಾಂಗೆ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ADVERTISEMENT

ಕಗ್ಗಲೀಪುರದಲ್ಲಿ ಜ. 21ರಂದು ಪುಟ್ಟಸ್ವಾಮಿ ಮಲಗಿರುವ ಜಾಗಕ್ಕೆ ಆರೋಪಿ ಬಂದು ಜಗಳ ತೆಗೆದಿದ್ದಾನೆ. ಪಕ್ಕದಲ್ಲಿದ್ದ ಸಿಮೆಂಟ್‌ ಬ್ಲಾಕ್‌ ಇಟ್ಟಿಗೆಯನ್ನು ತಲೆಯ ಮೇಲೆ ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಘಟನಾ ಸ್ಥಳದಲ್ಲಿ ಸಿಕ್ಕ ಮಾಹಿತಿ ಮತ್ತು ಕೊಲೆಗಾರನ ಮೈಮೇಲಿನ ಬಟ್ಟೆಯಲ್ಲಿದ್ದ ರಕ್ತದ ಕಲೆಯಿಂದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಹಾರೋಹಳ್ಳಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಸಿ. ಸತೀಶ್‌, ಕಗ್ಗಲೀಪುರ ಎಸ್‌ಐ ವೆಂಕಟೇಶ್‌ ಕೆ. ಮತ್ತು ತಂಡ ಕಾರ್ಯಾಚರಣೆ
ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.