ADVERTISEMENT

ಪೆಟ್ರೋಲ್‌ ಇಲ್ಲದೆ ಸವಾರರ ಪರದಾಟ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2021, 4:51 IST
Last Updated 17 ಅಕ್ಟೋಬರ್ 2021, 4:51 IST

ಮಾಗಡಿ: ತಾಲ್ಲೂಕಿನ ಕೆಲವು ಬಂಕ್‌ಗಳಲ್ಲಿ ಪೆಟ್ರೋಲ್‌ ಇಲ್ಲದೆ ವಾಹನ ಸವಾರರು ಪರದಾಡಿದರು.

ಪಟ್ಟಣದ ಬಿ.ಕೆ. ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ಮೂರು ಬಂಕ್‌ಗಳಲ್ಲಿ ಪೆಟ್ರೋಲ್‌ ಇರಲಿಲ್ಲ. ಆಯುಧಪೂಜೆ, ವಿಜಯದಶಮಿ ಅಂಗವಾಗಿ ಪೆಟ್ರೋಲ್‌ ಟ್ಯಾಂಕರ್‌ಗಳು ಸಂಚರಿಸಿರಲಿಲ್ಲ. ಇದರಿಂದ ಪೂರೈಕೆ ಸ್ಥಗಿತಗೊಂಡಿದೆ ಎಂದು ಬಂಕ್‌ ವ್ಯವಸ್ಥಾಪಕರು ತಿಳಿಸಿದರು. ವಾಹನ ಚಾಲಕರು, ಮಾಲೀಕರು ಬಂಕ್‌ ಮಾಲೀಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣ ಮತ್ತು ಇತರೆಡೆ ಇರುವ ಪೆಟ್ರೋಲ್‌ ಬಂಕ್‌ಗಳಲ್ಲಿ ಅಳತೆ ಮಾಪನ ಸರಿಯಿಲ್ಲ. ಕೇಳಿದರೆ ಸಬೂಬು ಹೇಳುತ್ತಿದ್ದು, ಗ್ರಾಹಕರಿಗೆ ವಂಚನೆಯಾಗುತ್ತಿದೆ. ಅಳತೆ ಮಾಡಬೇಕಾದ ಅಧಿಕಾರಿಗಳು ಸಹ ಪೆಟ್ರೋಲ್‌ ಬಂಕ್‌ ಮಾಲೀಕರೊಂದಿಗೆ ಶಾಮೀಲಾಗಿದ್ದಾರೆ ಎಂದು ವಾಹನ ಸವಾರರು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.