ರಾಮನಗರ: ಮಾಗಡಿ ತಾಲ್ಲೂಕಿನ ಕೆಂಪಸಾಗರ ಸಮೀಪ ಓಡಾಡಿಕೊಂಡಿದ್ದ ಹೈದರಾಬಾದ್ನ ಹತ್ತಕ್ಕೂ ಹೆಚ್ಚು ಕಾರ್ಮಿಕರನ್ನು ಭಾನುವಾರ ತಪಾಸಣೆಗೆ ಒಳಪಡಿಸಲಾಗಿದ್ದು, ಜ್ವರಕ್ಕೆ ತುತ್ತಾದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಮಿಕರು ಕೆಲಸವಿಲ್ಲದೇ ಓಡಾಡಿಕೊಂಡು ಇದ್ದದ್ದನ್ನು ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದರು. ಆರೋಗ್ಯ ಇಲಾಖೆ ಹಾಗೂ ಪೊಲೀಸರ ನೇತೃತ್ವದಲ್ಲಿ ಅವರ ಆರೋಗ್ಯ ತಪಾಸಣೆ ನಡೆಯಿತು. ಎಲೆಕ್ಟ್ರೋ ಥರ್ಮಾಮೀಟರ್ನಿಂದ ತಪಾಸಣೆ ಮಾಡಿದ ಸಂದರ್ಭ ಜ್ವರ ಕಂಡು ಬಂದ ಮೂವರನ್ನು ಮಾಗಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲ ಕಾರ್ಮಿಕರ ಕೈಗೆ ಮುದ್ರೆ ಹಾಕಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.