ADVERTISEMENT

20ರ ಒಳಗೆ ಕೆಲಸಕ್ಕೆ ಹಾಜರಾಗುವಂತೆ ಟೊಯೊಟಾ ಕಾರ್ಮಿಕರಿಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 11:31 IST
Last Updated 19 ಜನವರಿ 2021, 11:31 IST

ರಾಮನಗರ: ಬಿಡದಿಯ ಟೊಯೊಟಾ ಕಾರ್ಖಾನೆಯು ತನ್ನೆಲ್ಲ‌ ಕಾರ್ಮಿಕರಿಗೆ ಲೀಗಲ್ ನೋಟಿಸ್ ನೀಡಿದ್ದು, ಇದೇ 20ರ ಒಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ಈಗಾಗಲೇ 1350 ಸಿಬ್ಬಂದಿ ಕೆಲಸಕ್ಕೆ ಬಂದಿದ್ದು, ಉಳಿದವರೂ ನಿಗದಿತ ದಿನದೊಳಗೆ ಕೆಲಸಕ್ಕೆ ಹಾಜರಾಗಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಂಪನಿ ಎಚ್ಚರಿಸಿದೆ.

ಅಮಾನತಾಗಿರುವ 68 ಕಾರ್ಮಿಕರ ಪ್ರಕರಣ ವಿಚಾರಣೆ ಹಂತದಲ್ಲಿ ಇದ್ದು, ಅಮಾನತು ಆದೇಶ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಟಿಕೆಎಂ ಆಡಳಿತ ಮಂಡಳಿ‌ ಸ್ಪಷ್ಟನೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.