ADVERTISEMENT

ಟೊಯೊಟಾ: ಮತ್ತೆ 20 ಕಾರ್ಮಿಕರು ಅಮಾನತು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 13:40 IST
Last Updated 4 ಡಿಸೆಂಬರ್ 2020, 13:40 IST
ಶುಕ್ರವಾರ ಟೊಯೊಟಾ ಕಾರ್ಮಿಕರು ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದರು
ಶುಕ್ರವಾರ ಟೊಯೊಟಾ ಕಾರ್ಮಿಕರು ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದರು   

ಬಿಡದಿ: ಟೊಯೊಟಾ ಕಿರ್ಲೋಸ್ಕರ್ ಕಾರ್ಖಾನೆ ಆಡಳಿತ ಮಂಡಳಿಯು ಮತ್ತೆ 20 ಕಾರ್ಮಿಕರನ್ನು ಸೇವೆಯಿಂದ ಅಮಾನತು ಮಾಡಿದೆ. ಇದರಿಂದಾಗಿ ಅಮಾನತುಗೊಂಡವರ ಸಂಖ್ಯೆ 60ಕ್ಕೆ ಏರಿಕೆ ಆಗಿದೆ.

‘ಕೆಲಸಕ್ಕೆ ಬರಲು ಬಯಸುವ ಇತರೆ ಕಾರ್ಮಿಕರಿಗೆ ಬೆದರಿಕೆ ಒಡ್ಡುವುದು. ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು. ಕಂಪನಿ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಇವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ನ್ಯಾಯಸಮ್ಮತ ವಿಚಾರಣೆ ನಡೆಸಲಾಗುವುದು ’ ಎಂದು ಟಿಕೆಎಂ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಮಾನತು ಶಿಕ್ಷೆ ಕುರಿತು ಟಿಕೆಎಂ ಕಾರ್ಮಿಕ ಸಂಘ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ‘ಕಂಪನಿಯು ತನಗೆ ಸಂಬಂಧ ಇಲ್ಲದ ಹೊರಗಿನ ವಿಷಯದ ಆರೋಪದ ಮೇಲೆ ಕಾರ್ಮಿಕರನ್ನು ಅಮಾನತು ಮಾಡುವ ಮೂಲಕ ತನ್ನ ಅಸಹಾಯಕತೆಯನ್ನು ಹೊರಹಾಕಿದೆ. ಇದರ ವಿರುದ್ಧ ಪ್ರತಿಭಟನೆ ಮುಂದುವರಿಯಲಿದೆ’ ಎಂದು ಸಂಘದ ಕಾರ್ಯದರ್ಶಿ ಬಸವರಾಜ ಹವಾಲ್ದಾರ್‌ ತಿಳಿಸಿದ್ದಾರೆ. ಕಾರ್ಖಾನೆ ಮುಂಭಾಗ ನೌಕರರ ಪ್ರತಿಭಟನೆಯು 26ನೇ ದಿನವಾದ ಶುಕ್ರವಾರವೂ ಮುಂದುವರಿದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.