ADVERTISEMENT

ಚಿತ್ರೀಕರಣದ ವೇಳೆ ದುರಂತ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2021, 14:14 IST
Last Updated 24 ಆಗಸ್ಟ್ 2021, 14:14 IST

ರಾಮನಗರ: ‘ಲವ್‌ ಯೂ ರಚ್ಚು’ ಸಿನಿಮಾ ಚಿತ್ರೀಕರಣ ದುರಂತಕ್ಕೆ ಸಂಬಂಧಿಸಿ ಚಿತ್ರತಂಡದ ಮೂವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯವು ಸೆಪ್ಟೆಂಬರ್‌ 7ರವರೆಗೆ ವಿಸ್ತರಿಸಿದೆ.

ಆರೋಪಿಗಳಾದ ಚಿತ್ರದ ನಿರ್ದೇಶಕ ಶಂಕರ್, ಸಾಹಸ ನಿರ್ದೇಶಕ ವಿನೋದ್ ಕುಮಾರ್ ಹಾಗೂ ಕ್ರೇನ್‌ ಚಾಲಕ ಮಹದೇವು ಅವರು ಸದ್ಯ ರಾಮನಗರ ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಮಂಗಳವಾರ ಅವರ ನ್ಯಾಯಾಂಗ ಬಂಧನದ ಅವಧಿಯು ಮುಕ್ತಾಯಗೊಂಡಿದ್ದು, ವಿಡಿಯೊ ಕಾನ್ಫರೆನ್ಸ್‌ ಮೂಲಕ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆ.7ರವರೆಗೆ ವಿಸ್ತರಿಸಿ ನ್ಯಾಯಾಧೀಶೆ ಅನುಪಮಾ ಲಕ್ಷ್ಮಿ ಆದೇಶ ನೀಡಿದರು.

ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಈ ಆರೋಪಿಗಳು ಇಲ್ಲಿನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಚಿತ್ರತಂಡದ ಕೆಲವರು ನಿರೀಕ್ಷಣಾ ಜಾಮೀನಿಗೆ ಮೊರೆ ಹೋಗಿದ್ದಾರೆ. ಈ ಎಲ್ಲ ಅರ್ಜಿಗಳ ವಿಚಾರಣೆಯು ಇದೇ 26 ರಂದು ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.