ADVERTISEMENT

ಸೀಲ್‌ ಇದ್ದ ಪ್ರಯಾಣಿಕರನ್ನು ಕೆಳಗಿಳಿಸುವಂತೆ ಒತ್ತಾಯ

CHANNPATNA

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 9:07 IST
Last Updated 9 ಜುಲೈ 2020, 9:07 IST

ಚನ್ನಪಟ್ಟಣ: ಸರ್ಕಾರಿ ಬಸ್‌ನಲ್ಲಿ ಕೈಗೆ ಸೀಲು ಹಾಕಿಸಿಕೊಂಡಿದ್ದ ಪ್ರಯಾಣಿಕರನ್ನು ಗಮನಿಸಿ ಅವರನ್ನು ಬಸ್ಸಿನಿಂದ ಕೆಳಗೆ ಇಳಿಸುವಂತೆ ಪ್ರಯಾಣಿಕರು ಒತ್ತಾಯಿಸಿದ ಘಟನೆ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬುಧವಾರ ನಡೆಯಿತು.‌

ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಸರ್ಕಾರಿ ಬಸ್ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಾಫಿ –ತಿಂಡಿಗಾಗಿ ನಿಲ್ಲಿಸಿದ್ದ ಸಂದರ್ಭದಲ್ಲಿ ಕೈಗೆ ಸೀಲ್ ಹಾಕಿಸಿಕೊಂಡಿದ್ದ ಉತ್ತರ ಪ್ರದೇಶದ ಮೂಲದವರು ಎನ್ನಲಾದ ಇಬ್ಬರು ಯುವತಿಯರು ನಾಲ್ವರು ಪುರುಷರನ್ನು ಗಮನಿಸಿ ಅವರನ್ನು ಬಸ್ಸಿನಿಂದ ಕೆಳಗೆ ಇಳಿಸುವಂತೆ ಪ್ರಯಾಣಿಕರು ಬಸ್ ಚಾಲಕ ಹಾಗೂ ನಿರ್ವಾಹಕರನ್ನು ಒತ್ತಾಯಿಸಿದರು.

ಸೀಲ್ ಹಾಕಿಸಿಕೊಂಡವರು 14 ದಿನ ಕ್ವಾರಂಟೈನ್ ಮುಗಿಸಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮೈಸೂರಿಗೆ ಪ್ರಯಾಣಿಸುತ್ತಿರುವುದಾಗಿ ಪತ್ರ ತೋರಿಸಿದ್ದಾರೆ. ಅವರ ಬಳಿ ಇರುವ ಪತ್ರ ನೋಡಿದರೂ ತೃಪ್ತರಾಗದ ಪ್ರಯಾಣಿಕರು ಮತ್ತೆ ರಂಪಾಟ ನಡೆಸಿದರು ಎಂದು ವ್ಯವಸ್ಥಾಪಕರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.