ADVERTISEMENT

ಅಪಘಾತ: ಸಹೋದರರು ಸಾವು

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 2:24 IST
Last Updated 22 ಸೆಪ್ಟೆಂಬರ್ 2022, 2:24 IST
ಮೋಹನ್‌
ಮೋಹನ್‌   

ಕನಕಪುರ: ಇಲ್ಲಿನ ಹಾರೋಹಳ್ಳಿ ಕೆರೆ ಏರಿ ಮೇಲೆ ಲಾರಿ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದು ಇಬ್ಬರು ಸಹೋದರರು ಯುವಕರು ಸ್ಥಳದಲ್ಲೇ
ಸಾವನಪ್ಪಿದ್ದಾರೆ.

ತಾಲ್ಲೂಕಿನ ಹಾರೋಹಳ್ಳಿ ಹೋಬಳಿ ಪರುವಯ್ಯನಪಾಳ್ಯದ ಮೋಹನ್‌ (18) ಮತ್ತು ಪ್ರಜ್ವಲ್‌(17) ಮೃತರು. ಇವರಿಬ್ಬರು ಅಣ್ಣತಮ್ಮಂದಿರ ಮಕ್ಕಳು.

ಮಂಗಳವಾರ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ದಯಾನಂದ ಸಾಗರ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದವರನ್ನು ನೋಡಲು ಇಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮೃತದೇಹಗಳನ್ನು ದಯಾನಂದ ಸಾಗರ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಸಂಬಂಧ ಹಾರೋಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿ ಸಾವು

ಬೆಂಗಳೂರು ರಸ್ತೆಯ ರೈಸ್‌ಮಿಲ್‌ ಬಳಿ ಬುಧವಾರ ಸಂಜೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್‌ ಗುದ್ದಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಸಬಾ ಹೋಬಳಿ ಬರಡನಹಳ್ಳಿ ಗ್ರಾಮದ ಮಾವತ್ತೂರೆಗೌಡರ ಪುತ್ರ ದರ್ಶನ್‌ (40) ಮೃತರು.
ಬುಧವಾರ ಮಧ್ಯಾಹ್ನ ಬರಡನಹಳ್ಳಿ ಗ್ರಾಮದಿಂದ ರೈಸ್‌ಮಿಲ್‌ ಬಳಿಗೆ ಬಂದಿದ್ದ ದರ್ಶನ್‌ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಬೈಕ್‌ ಗುದ್ದಿದೆ. ಬೈಕ್‌ ಗುದ್ದಿದ ಬಿರುಸಿಗೆ ದರ್ಶನ್‌ ರಸ್ತೆಯ ಮೇಲೆ ಬಿದ್ದು ತಲೆ ಒಡೆದು ಅತಿಯಾದ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಬೈಕ್‌ ಸವಾರನೂ ಗಾಯಗೊಂಡಿದ್ದು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಬಂಧ ಮೃತರ ತಾಯಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.