ADVERTISEMENT

ಜಿಂಕೆ ಬೇಟೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 3:19 IST
Last Updated 18 ಜೂನ್ 2025, 3:19 IST
ಕನಕಪುರ ಕೋಡಿಹಳ್ಳಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಆರೋಪಿಗಳನ್ನು ಬಂಧಿಸಿದರು ಅರಣ್ಯ ಇಲಾಖೆ ಅಧಿಕಾರಿಗಳು
ಕನಕಪುರ ಕೋಡಿಹಳ್ಳಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಆರೋಪಿಗಳನ್ನು ಬಂಧಿಸಿದರು ಅರಣ್ಯ ಇಲಾಖೆ ಅಧಿಕಾರಿಗಳು   

ಕನಕಪುರ: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಕೋಡಿಹಳ್ಳಿ ವನ್ಯಜೀವಿ ವಲಯದಲ್ಲಿ ಜೂನ್‌ 7ರಂದು ಜಿಂಕೆ ಬೇಟೆ ಆಡಿದ ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಹುಣಸನಹಳ್ಳಿಯ ವಿನೋದ್ ಕುಮಾರ್ (30) ಮತ್ತು ಮಾಯಂಡಿ (38) ಬಂಧಿತ ಆರೋಪಿಗಳು. ಇವರ ವಿರುದ್ಧ ಅರಣ್ಯ ಕಾಯ್ದೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. 

ಕೋಡಿಹಳ್ಳಿ ಆರ್‌ಎಫ್ಒ ಆಂತೋನಿ ರೇಗೊ, ಉಪ ವಲಯ ಅರಣ್ಯಾಧಿಕಾರಿಗಳಾದ ದೀಪಕ್, ಚೇತನ್, ಅರಣ್ಯಗಸ್ತು ಪಾಲಕರಾದ ಜಗದೀಶ್, ಯತೀಶ್, ಅರಣ್ಯ ವೀಕ್ಷಕ ಮಾರುತಿ ಆರೋಪಿಗಳ ಮನೆಯ ಮೇಲೆ ದಾಳಿ ನಡೆಸಿದ್ದರು.

ADVERTISEMENT

ಆರೋಪಿಗಳು ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ ಜಿಂಕೆಯ ಮಾಂಸ, ಜಿಂಕೆ ಕೊಂಬುಗಳು, ಒಂಟಿ ನಳಿಕೆ ಬಂದೂಕು ಹಾಗೂ ಮದ್ದು, ಗುಂಡುಗಳನ್ನು ವಶಪಡಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.