ರಾಮನಗರ: ಆಯುಷ್ ಇಲಾಖೆ ವತಿಯಿಂದ ಇದೇ 11ರಂದು ಯುನಾನಿ ದಿನವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ಯುನಾನಿ ಆರೋಗ್ಯ ಶಿಬಿರ, ಮನೆಮದ್ದು ಮತ್ತು ಪ್ರದರ್ಶನದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಪ್ರಬಂಧಗಳ ಆಹ್ವಾನ
ರಾಮನಗರ: ಕರ್ನಾಟಕ ಸಾಹಿತ್ಯ ಆಕಾಡೆಮಿಯು ಮಾರ್ಚ್ 19 ಮತ್ತು 20 ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ಎಂ.ಗೋಪಾಲಕೃಷ್ಣ ಅಡಿಗರ ಜನ್ಮಶತಮಾನೋತ್ಸವ ನೆನಪಿಗಾಗಿ ಗೋಪಾಲಕೃಷ್ಣ ಅಡಿಗ ಮತ್ತು ಕನ್ನಡ ಸಾಹಿತ್ಯ ಎಂಬ ವಿಷಯದಡಿ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ.
ಈ ವಿಚಾರ ಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳು ನಡೆಯಲಿವೆ. ಗೋಷ್ಠಿಯಲ್ಲಿ ಅಡಿಗರ ಸಾಹಿತ್ಯ ಕುರಿತಾಗಿ ಪ್ರಬಂಧ ಮಂಡಿಸುವವರು ಇದೇ 25ರ ಒಳಗೆ ಅಕಾಡೆಮಿಯ ಇ-ಮೇಲ್ www.karnatakasahithyaacademy.org ವಿಳಾಸಕ್ಕೆ ಕಳುಹಿಸಬೇಕು. ಮಾಹಿತಿಗಾಗಿ ದೂ.ಸಂ. 080-22211730, 22106460 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.