
ಪ್ರಜಾವಾಣಿ ವಾರ್ತೆ
ಚನ್ನಪಟ್ಟಣ: ತಾಲ್ಲೂಕಿನ ಹೊನ್ನಿಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಮರಿಸ್ವಾಮಿ, ಉಪಾಧ್ಯಕ್ಷರಾಗಿ ಎಚ್.ಸಿ. ನಾಗರಾಜು ಅವಿರೋಧವಾಗಿ ಆಯ್ಕೆಯಾದರು.
ಭಾನುವಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ಪುರುಷೋತ್ತಮ್ ಕಾರ್ಯನಿರ್ವಹಿಸಿದರು.
ಇದಕ್ಕೂ ಮೊದಲು ನಡೆದ ಸಂಘದ ನಿರ್ದೇಶಕರ ಆಯ್ಕೆ ಚುನಾವಣೆಯಲ್ಲಿ ನೂತನ ನಿರ್ದೇಶಕರಾಗಿ ನಾಗರಾಜು, ಕೆ.ಪ್ರಸನ್ನಕುಮಾರ್, ಮಲ್ಲೇಶ್, ಸಿದ್ದರಾಜು, ವೆಂಕಟಲಕ್ಷ್ಮಮ್ಮ, ಶಾಂತಮ್ಮ, ಮಂಜುಳ, ರಾಜೇಗೌಡ ಆಯ್ಕೆಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.