ಕನಕಪುರ: ಇಲ್ಲಿನ ಕಸಬಾ ಹೋಬಳಿ ಚಿಕ್ಕಮುದುವಾಡಿ ಗ್ರಾಮದಲ್ಲಿರುವ ಶ್ರೀ ಸಿಂಹಾಚಲ ಕ್ಷೇತ್ರದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಮಹೋತ್ಸವವು ಜ.6 ರಂದು ನಡೆಯಲಿದೆ.
ಸೋಮವಾರ ಬೆಳಿಗ್ಗೆ ಶ್ರೀ ಮಹಾಲಕ್ಷ್ಮೀ ಸಮೇತ ಸ್ವಾಮಿಗೆ ಸುಪ್ರಭಾತ ಸೇವೆ, ಮಂಗಳವಾದ್ಯ ಸಮೇತ ವೇದ ಘೋಷ, ಸ್ವಾಮಿಗೆ ಪುಷ್ಪಾಲಂಕಾರ, ಮಹಾ ಮಂಗಳಾರತಿ, ವೈಕುಂಠ ಮಹಾದ್ವಾರ ಪ್ರವೇಶ, ತೀರ್ಥ ಪ್ರಸಾದ ವಿನಿಯೋಗ ನೆರವೇರಲಿದೆ.
ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಬಂದು ಸ್ವಾಮಿಯ ದರ್ಶನ ಪಡೆದು ತೀರ್ಥ ಪ್ರಸಾದವನ್ನು ಸ್ವೀಕರಿಸಬೇಕೆಂದು ಚಿಕ್ಕಮುದುವಾಡಿ ಹಾಗೂ ಸುತ್ತಲಿನ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.