ADVERTISEMENT

ಬೊಮ್ಮಾಯಿಗೆ ಗಂಡಸುತನ ಇದ್ದರೆ ಕ್ರಮ ಕೈಗೊಳ್ಳಬೇಕು: ಕುಮಾರಸ್ವಾಮಿ ಕಿಡಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 10:04 IST
Last Updated 31 ಮಾರ್ಚ್ 2022, 10:04 IST
   

ರಾಮನಗರ: ವಿಶ್ವ ಹಿಂದೂ ಪರಿಷತ್, ಭಜರಂಗ ದಳದವರು ಕಿಡಿಗೇಡಿಗಳು, ಸಮಾಜ ಘಾತುಕರು. ಅವರಿಗೆ ರೈತರ ಬದುಕು ಗೊತ್ತಿದೆಯೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ‌‌. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ನಮ್ಮ ರೈತರು ಕತ್ತರಿಸುವ ಮಾಂಸ ಕ್ಲೀನ್ ಮಾಡಲು, ರೇಷ್ಮೆ- ಮಾವು ಕೊಳ್ಳಲು ಅದೇ ಸಮಾಜದವರು ಬರಬೇಕು. ಇವ್ಯಾವೋ ವಿಶ್ವ ಹಿಂದು ಪರಿಷತ್, ಬಜರಂಗದಳದವರು ಇವರ ಹೊಟ್ಟೆಪಾಡಿಗೆದೇಶ ಹಾಳು ಮಾಡೋದಕ್ಕೆ ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಷ್ಟು ದಿನ ಹಲಾಲ್ ಮಾಡಿದ ಮಾಂಸ ತಿಂದಿದ್ದೇವೆ. ಚೆನ್ನಾಗಿಯೇ ಇದ್ದೀವಲ್ಲ. ನಮ್ಮನ್ನು ದೇವರು ಮೆಚ್ಚುವುದಿಲ್ಲವಾ? ಎಂದು ಪ್ರಶ್ನಿಸಿದರು.

ADVERTISEMENT

ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಗಂಡಸುತನ ಇದ್ದರೆ ಕ್ರಮ ಕೈಗೊಳ್ಳಬೇಕು. ಏನೂ ಗೊತ್ತಿಲ್ಲದಂತೆ ಮೌನವಾಗಿ ಇರಬಾರದು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.