ರಾಮನಗರ: ನಗರದ ಹೊರವಲಯದಲ್ಲಿ ಇರುವ ಬೋಳಪ್ಪನಹಳ್ಳಿ ಕೆರೆಯಲ್ಲಿ ಬುಧವಾರ ಮುಂಜಾನೆ ಆನೆಯೊಂದು ಕಾಣಿಸಿಕೊಂಡಿದೆ.
ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದಿಂದ ಆನೆ ಬಂದಿದ್ದು, ಸದ್ಯ ಕೆರೆಯೊಳಗೆ ಬೀಡು ಬಿಟ್ಟಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಸಂಜೆ ನಂತರ ಆನೆಯನ್ನು ಕಾಡಿನತ್ತ ಓಡಿಸಲು ಯೋಜಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.