ADVERTISEMENT

ಊಟದಲ್ಲಿ ವಿಷ ಬೆರೆಸಿ ಪತ್ನಿ ಕೊಂದ ಪತಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 15:58 IST
Last Updated 14 ಜನವರಿ 2020, 15:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ಊಟದಲ್ಲಿ ವಿಷ ಬೆರೆಸಿ ಪತಿಯೇ ಪತ್ನಿಯನ್ನು ಕೊಂದ ಘಟನೆ ಇಲ್ಲಿನ ಹನುಮಂತ ನಗರದಲ್ಲಿ ನಡೆದಿದೆ.

ದೀಪಾ (24) ಮೃತ ಮಹಿಳೆ. ಆರೋಪಿ ವೆಂಕಟೇಶ್‌ (30) ನನ್ನು ಪೊಲೀಸರು ಬಂಧಿಸಿದ್ದಾರೆ.

11 ತಿಂಗಳ ಹಿಂದಷ್ಟೇ ಇವರ ವಿವಾಹವಾಗಿತ್ತು. ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆದಿದ್ದು, ರಾಜೀ ಪಂಚಾಯಿತಿಯೂ ಆಗಿತ್ತು. ಸೋಮವಾರ ರಾತ್ರಿಯೂ ಇಬ್ಬರ ನಡುವೆ ಜಗಳವಾಗಿತ್ತು. ಇದರಿಂದ ಕುಪಿತನಾಗಿದ್ದ ಪತಿ ಊಟದಲ್ಲಿ ವಿಷ ಬೆರೆಸಿದ್ದ. ಇದನ್ನು ಸೇವಿಸಿ ದೀಪಾ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.